Thursday, May 16, 2024
Homeಕರಾವಳಿಬೆಳ್ತಂಗಡಿ ಯುವ ವಕೀಲರ ವೇದಿಕೆ : ನೆರವಿಗಾಗಿ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ ಯುವ ವಕೀಲರ ವೇದಿಕೆ : ನೆರವಿಗಾಗಿ ಮುಖ್ಯಮಂತ್ರಿಗಳಿಗೆ ಮನವಿ

spot_img
- Advertisement -
- Advertisement -

ಬೆಳ್ತಂಗಡಿಲಾಕ್‌ಡೌನ್ ನಿಂದಾಗಿ ಇಡೀ ದೇಶದ ಅರ್ಥ ವ್ಯವಸ್ಥೆಯೇ ಕುಸಿದಿದೆ. ಸಾಮಾನ್ಯ ವರ್ಗದ ಜನರು ಜೀವನ ನಿರ್ವಹಣೆಗೆ  ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ  ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ವೃತ್ತಿ ನಿರತ ವಕೀಲರ ಸಮುದಾಯಕ್ಕೆ 5 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಆದರೆ, ಇನ್ನೂ ಹೆಚ್ಚುವರಿಯಾಗಿ 45 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಬೆಳ್ತಂಗಡಿ ತಾಲೂಕಿನ ಯುವ ವಕೀಲರ ವೇದಿಕೆ ಬೆಳ್ತಂಗಡಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದೆ.

ಕರ್ನಾಟಕದಲ್ಲಿ ಸುಮಾರು 1 ಲಕ್ಷ ವಕೀಲರು ವೃತ್ತಿಯಲ್ಲಿ ತೊಡಗಿದ್ದಾರೆ. ಹೆಚ್ಚಿನವರು ಯುವ ವಕೀಲರಾಗಿದ್ದಾರೆ ಹಾಗೂ ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದಾರೆ. ಈಗಾಗಲೇ ಸರ್ಕಾರ ಘೋಷಿಸಿದ 5 ಕೋಟಿ ರೂ. ವಿಶೇಷ ಪ್ಯಾಕೇಜ್ ಸಂಕಷ್ಟದಲ್ಲಿರುವ ವಕೀಲರಿಗೆ ಸಾಕಾಗುವುದಿಲ್ಲ. ಈಗಾಗಲೇ ತೆಲಂಗಾಣ ಸರ್ಕಾರ ವಕೀಲರ ಸಮುದಾಯಕ್ಕೆ 25 ಕೋಟಿ ರೂ. ಅನುದಾನ ಘೋಷಿಸಿದೆ. ಹಾಗಾಗಿ 45 ಕೋಟಿ ರೂ. ಹಣವನ್ನು ಹೆಚ್ಚುವರಿಯಾಗಿ ಬಿಡುಗಡೆಗೊಳಿಸಬೇಕು ಎಂದು ಸರ್ಕಾರಕ್ಕೆ  ಸಂಘ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ವಕೀಲರಾದ ಮನೋಹರ್ ಕುಮಾರ್ ಇಳಂತಿಲ, ಧನಂಜಯ ರಾವ್ ಧರ್ಪಿಂಜ, ಜೆಕೆ ಪೌಲ್ ಹಾಗೂ ಇನ್ನಿತರ ವಕೀಲರುಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!