Thursday, June 4, 2026
Homeತಾಜಾ ಸುದ್ದಿಜುಲೈ 16 ರಿಂದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಜುಲೈ 16 ರಿಂದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

- Advertisement -
- Advertisement -

ಬೆಂಗಳೂರು: ಜುಲೈ 16 ರಿಂದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.ಆಗಸ್ಟ್‌ 15 ಇಲ್ಲವೇ 16ರಂದು ನಿಮ್ಮ ಖಾತೆಗೆ ಹಣ ಬರಲಿದೆ ಅಂತ ಸಿಎಂಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಅವರು ಶುಕ್ರವಾರ ಬಜೆಟ್‌ ಮಂಡನೆ ಬಳಿಕ ಮಾತನಾಡಿದ ಅವರು,  ಈ ಬಜೆಟ್‌ ಐದು ಗ್ಯಾರಂಟಿಗಳು ಮತ್ತು ನಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ತಿಳಿಸಿದ್ದ ಭರವಸೆಗಳನ್ನು ಒಳಗೊಂಡಿದೆ. ಇದು ಗ್ಯಾರಂಟಿ ಬಜೆಟ್‌ ಆಗಿದೆ ಅಂತ ತಿಳಿಸಿದರು.

ನಾನು ಮಂಡನೆ ಮಾಡಿರುವ ಬಜೆಟ್‌ ಪೂರ್ಣ ಪ್ರಮಾಣದ ಬಜೆಟ್‌ ಆಗಿದೆ. ಜನ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ ಅಂತ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದೆ. ಇನ್ನೂ ಗ್ಯಾರಂಟಿಗಳ ಬಗ್ಗೆ ವಿ ಪಕ್ಷದವರು ನಮ್ಮನ್ನು ಪ್ರಶ್ನೆ ಮಾಡಿದ್ದಾರೆ. ಗ್ಯಾರಂಟಿ ಜಾರಿ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಒಂಬತ್ತು ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿವರು ಪ್ರಶ್ನೆ ಮಾಡುತ್ತಿದ್ದಾರೆ. ನಾವು ಗ್ಯಾರಂಟಿಗಳನ್ನು ಜಾರಿ ಮಾಡುವ ಬಗ್ಗೆ ಹೇಳಿದ್ದೆ, ಅದೇ ರೀತಿ ಈಗ ನಡೆದುಕೊಳ್ಳುತ್ತಿದ್ದೇವೆ. ಎಲ್ಲಾ ಗ್ಯಾರಂಟಿಗಳಿಗೆ ಹಣವನ್ನು ಒದಗಿಸಿದ್ದೇವೆ. ರಾಜ್ಯ ದಿವಾಳಿ ಆಗದೇ ಎಚ್ಚರ ವಹಿಸಿದ್ದೇವೆ ಎಂದಿದ್ದಾರೆ.

- Advertisement -

Latest News

error: Content is protected !!