Saturday, April 27, 2024
Homeತಾಜಾ ಸುದ್ದಿಮೋದಿ ನೇತೃತ್ವದ ಉನ್ನತ ಮಟ್ಟದ ತಂಡದಿಂದ ಚುನಾವಣಾ ಆಯುಕ್ತರ ನೇಮಕ; ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಿಂಗ್...

ಮೋದಿ ನೇತೃತ್ವದ ಉನ್ನತ ಮಟ್ಟದ ತಂಡದಿಂದ ಚುನಾವಣಾ ಆಯುಕ್ತರ ನೇಮಕ; ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಿಂಗ್ ಸಂಧು, ಜ್ಞಾನೇಶ್ ಕುಮಾರ್

spot_img
- Advertisement -
- Advertisement -

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಗುರುವಾರದಂದು ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಿಂಗ್ ಸಂಧು ಅವರನ್ನು ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಗುರುವಾರ ಹೇಳಿದ್ದಾರೆ.

ಇಬ್ಬರು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಉನ್ನತ ಮಟ್ಟದ ಆಯ್ಕೆ ಮಂಡಳಿಯ ಸಭೆ ಇಂದು ಮುಂಜಾನೆ ನಡೆದ ನಂತರ ಅವರು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಚುನಾವಣಾಧಿಕಾರಿಗಳನ್ನು ಆಯ್ಕೆ ಮಾಡಲು ನೇಮಕಗೊಂಡ ಸಮಿತಿಯ ಮೂವರು ಸದಸ್ಯರಲ್ಲಿ ಚೌಧರಿ ಕೂಡ ಒಬ್ಬರು.

ಸಮಿತಿ ಮುಂದೆ ಒಟ್ಟು ಆರು ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದ್ದು ಅವರೆಂದರೆ ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವ‌ ಪಾಂಡೆ, ಸುಖಬೀರ್ ಸಿಂಗ್ ಸಂಧು ಮತ್ತು ಸುಧೀರ್ ಕುಮಾರ್ ಗಂಗಾಧರ್ ರಹಾಟೆ, ಈ ಪೈಕಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರ ಹೆಸರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲು ಅಂತಿಮಗೊಳಿಸಲಾಗಿದೆ ಎಂದು ಚೌಧರಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!