Friday, May 17, 2024
Homeತಾಜಾ ಸುದ್ದಿಆಸಿಡ್ ನಾಗೇಶನಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

ಆಸಿಡ್ ನಾಗೇಶನಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು : ಯುವತಿ ಮೇಲೆ ಆಸಿಡ್ ದಾಳಿ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಆರೋಪಿ ನಾಗೇಶ್ ನನ್ನು ಬಂಧಿಸಿದ್ದುನಾಗೇಶ್ ನಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರು ದಕ್ಷತೆಯಿಂದ ಶ್ರಮ ವಹಿಸಿ ಆರೋಪಿ ನಾಗೇಶ್ ನನ್ನು ಬಂಧಿಸಿದ್ದಾರೆ. ನಮ್ಮ ಪೊಲೀಸರಿಗೆ ತಮಿಳುನಾಡು ಪೊಲೀಸರು ಸಹಕರಿಸಿದ್ದಾರೆ. ತಮಿಳುನಾಡು ಪೊಲೀಸರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಆಸಿಡ್ ದಾಳಿ ಸಂಬಂಧ ಇಂದು ಫಾಸ್ಟ್ ಟ್ರ್ಯಾಕ್ ಕೋರ್ಟ್ ಪ್ರಕರಣದ ವಿಚಾರಣೆ ನಡೆಯಲಿದೆ. ಆರೋಪಿ ನಾಗೇಶ್ ನಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ. ನಾಗೇಶ್ ನಿಗೆ ಶಿಕ್ಷೆಯಾದರೆ ಸಂತ್ರಸ್ತೆ ಯುವತಿ ಹಾಗೂ ಕುಟುಂಬಕ್ಕೆ ನೆಮ್ಮದಿ ಸಿಗಲಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಚೇತರಿಸಿಕೊಳ್ಳುತ್ತಿದ್ದು, ಯುವತಿ ಆದಷ್ಟು ಬೇಗ ಗುಣಮುಖರಾಗಿ ಎಂದು ಹಾರೈಸುತ್ತೇನೆ ಎಂದರು.

- Advertisement -
spot_img

Latest News

error: Content is protected !!