Sunday, May 5, 2024
Homeಕರಾವಳಿಸುಳ್ಯ;  ಕಾಂಗ್ರೆಸ್ ಮುಖಂಡ ಎಸ್‌. ಸಂಶುದ್ದೀನ್‌ ಮನೆಯಲ್ಲಿ ಕಳ್ಳತನ ಪ್ರಕರಣ; ಆರೋಪಿಗಳನ್ನು ಬಂಧಿಸಿದ ಪೊಲೀಸರು: ಮನೆ...

ಸುಳ್ಯ;  ಕಾಂಗ್ರೆಸ್ ಮುಖಂಡ ಎಸ್‌. ಸಂಶುದ್ದೀನ್‌ ಮನೆಯಲ್ಲಿ ಕಳ್ಳತನ ಪ್ರಕರಣ; ಆರೋಪಿಗಳನ್ನು ಬಂಧಿಸಿದ ಪೊಲೀಸರು: ಮನೆ ಮುಂದೆ ನ್ಯೂಸ್ ಪೇಪರ್ ನೋಡಿ ಕಳ್ಳತನ ಮಾಡಿದ್ರು ಆರೋಪಿಗಳು

spot_img
- Advertisement -
- Advertisement -

ಸುಳ್ಯ;  ಕಾಂಗ್ರೆಸ್ ಮುಖಂಡ ಎಸ್‌. ಸಂಶುದ್ದೀನ್‌ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಬಂಧನದ ವೇಳೆ ಅಚ್ಚರಿಯ ವಿಚಾರಗಳು ಬಯಲಾಗಿವೆ. ಮನೆ ಮುಂದೆ ನ್ಯೂಸ್ ಪೇಪರ್ ನೋಡಿ ಆರೋಪಿಗಳು ಕಳ್ಳತನ ಮಾಡಿದ್ರು ಅನ್ನೋದು ಗೊತ್ತಾಗಿದೆ. ಫಯಾಜ್‌ ಹಾಗೂ ಪ್ರಸನ್ನ ಬಂಧಿತ ಆರೋಪಿಗಳು.

ಇಬ್ಬರು ಆರೋಪಿಗಳಲ್ಲಿ ಫಯಾಜ್‌ನನ್ನು ಸಕಲೇಶಪುರ ಹಾಗೂ ಪ್ರಸನ್ನ ನನ್ನು ಬೆಂಗಳೂರಿನ ಗೋವಿಂದ ನಗರದಿಂದ ಬಂಧಿಸಲಾಗಿದೆ. ಅವರನ್ನು ಸುಳ್ಯಕ್ಕೆ ಕರೆತಂದು ದರೋಡೆಗೆ ಒಳಗಾಗಿದ್ದ ಮನೆ ಮತ್ತು ಪರಿಸರದ ಮಹಜರು ನಡೆಸಿದ್ದು ಬಳಿಕ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳ ಮೇಲೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಕಡೆ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ನ್ಯೂಸ್ ಪೇಪರ್ ನೀಡಿತ್ತು ಮನೆಯಲ್ಲಿ ಯಾರಿಲ್ಲ ಎಂಬ ಸುಳಿವು

ಕಳ್ಳರಿಗೆ ಆ ದಿನ ಸಂಶುದ್ದೀನ್‌ ಅವರ ಮನೆಯಲ್ಲಿ ಕಳ್ಳತನ ಮಾಡುವ ಉದ್ದೇಶ ಇರಲಿಲ್ಲವೆಂದು ವಿಚಾರಣೆ ವೇಳೆ ಗೊತ್ತಾಗಿದೆ. ಕಾಸರಗೋಡಿ ನಲ್ಲಿರುವ ಸಹಚರನನ್ನು ಭೇಟಿಯಾಗಲು ಘಟನೆ ನಡೆದ ದಿನ ಆರೋಪಿಗಳು ಕಾರಿನಲ್ಲಿ ಸುಳ್ಯ ಮೂಲಕ ಹೋಗುತ್ತಿದ್ದಾಗ ಅರಂಬೂರಿನಲ್ಲಿರುವ ಸಂಶುದ್ದೀನ್‌ ಅವರ ಮನೆಯ ಮುಂಭಾಗದ ಗೇಟಿನಲ್ಲಿ ನ್ಯೂಸ್‌ ಪೇಪರ್‌ ಇಟ್ಟಿದ್ದನ್ನು ಗಮನಿಸಿ ಯಾರು ಇರಲಾರರು ಎಂದು ದೃಢಪಡಿಸಿಕೊಂಡು ಕಳ್ಳತನ ಮಾಡಿದ್ದರು

ಗೆಳೆಯನ ಲಾಯರ್ ಫೀಸ್ ಕೊಡಲು ಕಳ್ಳತನ

ಕಾಸರಗೋಡಿನಲ್ಲಿ ಕಳ್ಳರು ಅವರ ಸ್ನೇಹಿತನ ಜತೆ ಮಾತುಕತೆ ನಡೆಸಿದಾಗ ವಕೀಲರಿಗೆ ಫೀಸ್‌ ಕೊಡಲು ಹಣದ ಸಮಸ್ಯೆಯನ್ನು ಹೇಳಿಕೊಂಡಿದ್ದ ಎನ್ನಲಾಗಿದೆ. ಅದಕ್ಕೆ ಆರೋಪಿಗಳು ಹಣ ಒದಗಿಸಿಕೊಡುವ ಭರವಸೆ ನೀಡಿ ಮರಳಿ ಬಂದು ಸಂಶುದ್ದೀನ್‌ ರವರ ಮನೆಯಲ್ಲಿ ದರೋಡೆ ನಡೆಸಿದ್ದರು.

- Advertisement -
spot_img

Latest News

error: Content is protected !!