- Advertisement -
- Advertisement -
ನವದೆಹಲಿ:72ನೇ ಗಣರಾಜ್ಯೋತ್ಸವದ ದಿನ ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಿಸಿದೇಶಾದ್ಯಂತ ಕೋಲಾಹಲ ಎಬ್ಬಿಸಿದ್ದ ಪ್ರಕರಣ ದ ಪ್ರಮುಖ ಆರೋಪಿ ದೀಪ್ ಸಿಧು ಕೊನೆಗೂ ದೆಹಲಿ ಪೊಲೀಸರ ವಿಶೇಷ ತಂಡಕ್ಕೆ ಸಿಕ್ಕಿ ಬಿದ್ದಿದ್ದಾನೆ.
ಟ್ರ್ಯಾಕ್ಟರ್ ಜಾಥಾ ನಡೆಸಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಹೋರಾಟದಲ್ಲಿ ಭಾರಿ ಘರ್ಷಣೆ ನಡೆದಿತ್ತು.ಈ ವೇಳೆ ಗುಂಪೊಂದು ಕೆಂಪುಕೋಟೆಗೆ ನುಗ್ಗಿ, ತ್ರಿವರ್ಣ ಧ್ವಜ ಎದುರಿನಲ್ಲಿ ಸಿಖ್ ಧ್ವಜವನ್ನು ಹಾರಿಸಿತ್ತು.
ಪ್ರಮುಖ ಆರೋಪಿಯಾಗಿದ್ದ ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಸರ್ಕಾರ ಘೋಷಿಸಿದ್ದು ದೆಹಲಿ ಪೊಲೀಸರ ವಿಶೇಷ ತಂಡ ಈತನನ್ನು ಬಂಧಿಸಿದೆ.
- Advertisement -