- Advertisement -
- Advertisement -
ಪುತ್ತೂರು; 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮಹಮ್ಮದ್ ಇಕ್ಬಾಲ್ (53 ) ಬಂಧಿತ ಆರೋಪಿ.
ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ನಿವಾಸಿಯಾಗಿರುವ ಆರೋಪಿ ಸುಮಾರು 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರವಿ ಬಿ ಎಸ್ ರವರು ಹಾಗೂ ಪೊಲೀಸ್ ಉಪನಿರೀಕ್ಷಕರು ಜಂಬೂರಾಜ್ ಮಹಾಜನ್ (ಕಾ&ಸು)ರವರ ಮಾರ್ಗದರ್ಶನದಲ್ಲಿ, ASI ಪರಮೇಶ್ವರ್ ಕೆ, Hc 396 ಮಧು ಕೆ ಎನ್, pc 1968 ಅಸ್ತಮಾ ರವರುಗಳ ತಂಡ ತೆಲಂಗಾಣ ರಾಜ್ಯದ ಹೈದ್ರಾಬಾದ್ ನಲ್ಲಿ ಪತ್ತೆ ಹಚ್ಚಿ, ದಿನಾಂಕ 28-09-2024 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
- Advertisement -