Wednesday, May 15, 2024
Homeಕರಾವಳಿಕೊಣಾಜೆ: ಲಾರಿಗಳ ಬ್ಯಾಟರಿ ಕದಿಯುತ್ತಿದ್ದ ಖದೀಮರ ಬಂಧನ !

ಕೊಣಾಜೆ: ಲಾರಿಗಳ ಬ್ಯಾಟರಿ ಕದಿಯುತ್ತಿದ್ದ ಖದೀಮರ ಬಂಧನ !

spot_img
- Advertisement -
- Advertisement -

ಮಂಗಳೂರು: ಲಾರಿಗಳ ಬ್ಯಾಟರಿ ಕದಿಯುತ್ತಿದ್ದ ಕಳ್ಳರನ್ನು ಬಂಧಿಸಲಾಗಿದೆ. 2.70 ಲಕ್ಷ ಮೌಲ್ಯದ ಸೊತ್ತುಗಳನ್ನು ಕೊಣಾಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣವೊಂದು ದಾಖಲಾಗಿತ್ತು . ಮಹಮ್ಮದ್ ಶರೀಫ್ ಎಂಬವರು ಕುರ್ನಾಡು ಮಿತ್ತಕೋಡಿ ಎಂಬಲ್ಲಿರುವ ಸೈಟ್‌ನಲ್ಲಿ ನಿಲ್ಲಿಸಿದ್ದ ಲಾರಿ , ಹಿಟಾಚಿ ಮತು ಜೆಸಿಬಿಗಳ 7 ಬ್ಯಾಟರಿಗಳನ್ನು ಕಳವು ಆಗಿತ್ತು. ರಾಜೇಶ್ ಕೆ (27) , ಸಿನಾನ್ (24) ಬಂಧಿತ ಆರೋಪಿಗಳು.

ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಬಾಳೆಪುಣಿ ಗ್ರಾಮದ ಸುಟ್ಟಾಡಿ ಕ್ರಾಸ್ ಬಳಿ ಟಾಟಾ ಏಸ್ ವಾಹನವನ್ನು ತಡೆದು ನಿಲ್ಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!