Wednesday, June 3, 2026
Homeಅಪರಾಧಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರ ಬಂಧನ

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರ ಬಂಧನ

- Advertisement -
- Advertisement -

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರನ್ನು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜನಾಡಿ ಗ್ರಾಮದ ಉರುಮನೆ ಕ್ರಾಸ್ ಎಂಬಲ್ಲಿ ಮಂಗಳವಾರ ಬಂಧಿಸಲಾಗಿದೆ.

ಆರೋಪಿಗಳನ್ನು ವರ್ಕಾಡಿ ಗ್ರಾಮದ ಮಹಮ್ಮದ್ ಹನೀಫ್, ತಲಪಾಡಿ ಸಮೀಪದ ಕೆಸಿ ರೋಡ್‌ನ ಹಬೀಬ್ (32), ಮಂಜೇಶ್ವರ ಗ್ರಾಮದ ಮಾಮದ್ ನಸೀಬ್(19) ಎಂದು ಗುರುತಿಸಲಾಗಿದೆ.

ಆರೋಪಿಗಳು ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಗಳಿಂದ 1.340 ಕೆಜಿ ಗಾಂಜಾ ವಶಪಡಿಸಲಾಗಿದೆ. ಇದರ ಮೌಲ್ಯ 13,400 ರೂ. ಮತ್ತು ವಶಪಡಿಸಿಕೊಂಡ ದ್ವಿಚಕ್ರ ವಾಹನದ ಮೌಲ್ಯ 25 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

- Advertisement -

Latest News

error: Content is protected !!