Saturday, June 28, 2025
Homeಕರಾವಳಿಉಡುಪಿಉಡುಪಿ: ಹಿಟ್ ಅಂಡ್ ರನ್ ಕೇಸ್; ಅರೆಸ್ಟ್ ಆಗಿದ್ದ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ...

ಉಡುಪಿ: ಹಿಟ್ ಅಂಡ್ ರನ್ ಕೇಸ್; ಅರೆಸ್ಟ್ ಆಗಿದ್ದ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಜಾಮೀನಿನ ಮೇಲೆ ಬಿಡುಗಡೆ

spot_img
- Advertisement -
- Advertisement -

ಉಡುಪಿ: ಹಿಟ್ ಅಂಡ್ ರನ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಕಾಪು ತಾಲೂಕಿನ ಬೆಳಪುವಿನ ಮಿಲಿಟರಿ ಕಾಲನಿಯಲ್ಲಿ ನವೆಂಬರ್ 11 ರಂದು ಬೆಳಗ್ಗೆ 5 ಗಂಟೆಗೆ ಪ್ರಜ್ವಲ್ ಚಲಾಯಿಸುತ್ತಿದ್ದ ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದಿತ್ತು.

ಅಪಘಾತದ ಬಳಿಕ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದು, ನಂತರ ಬೈಕ್ ಸವಾರ ಮೊಹಮ್ಮದ್ ಹುಸೈನ್ (39) ಎಂಬಾತ ಮೃತಪಟ್ಟಿದ್ದರು.

ನಿನ್ನೆ ಬಂಧಿಸಲ್ಪಟ್ಟಿದ್ದ ಆರೋಪಿ ಪ್ರಜ್ವಲ್ ಶೆಟ್ಟಿ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದು, ಮತ್ತೆ ವಿಚಾರಣೆಗೆ ಕರೆದಾಗ ಹಾಜರಾಗುವಂತೆ ಸೂಚಿಸಿರುವ ಶಿರ್ವ ಪೊಲೀಸರು ಸ್ಟೇಷನ್ ಬೇಲ್ ಮೇಲೆ ಬಿಡುಗಡೆಗೊಳಿಸಿದ್ದಾರೆ ಎನ್ನಲಾಗಿದೆ.

ಮೃತನ ಕುಟುಂಬಸ್ಥರಿಂದ ಹಿಟ್ ಆಂಡ್ ರನ್ ಎಂದು ಪೊಲೀಸ್ ದೂರು ದಾಖಲಾಗಿದ್ದು, ಆರೋಪಿ ಪ್ರಜ್ವಲ್ ಶೆಟ್ಟಿ ಚಲಾಯಿಸುತ್ತಿದ್ದ ಥಾರ್ ಜೀಪ್ ಈಗಾಗಲೇ ಶಿರ್ವ ಪೊಲೀಸರ ವಶದಲ್ಲಿದೆ.

- Advertisement -
spot_img

Latest News

error: Content is protected !!