Thursday, June 26, 2025
Homeಕರಾವಳಿಉಡುಪಿಉಡುಪಿ: ಬಂಧಿತ ರಿಶಾನ್ ಕುಟುಂಬದ ತನಿಖೆಯಾಗಬೇಕು: ರಘುಪತಿ ಭಟ್‌

ಉಡುಪಿ: ಬಂಧಿತ ರಿಶಾನ್ ಕುಟುಂಬದ ತನಿಖೆಯಾಗಬೇಕು: ರಘುಪತಿ ಭಟ್‌

spot_img
- Advertisement -
- Advertisement -

ಉಡುಪಿ: ನಿನ್ನೆ ನಡೆದ ಎನ್‌ಐಎ ದಾಳಿಯಲ್ಲಿ ಬಂಧಿತನಾಗಿರುವ ರಿಶಾನ್ ಕುಟುಂಬದ ತನಿಖೆಯಾಗಬೇಕು ಎಂದು ಶಾಸಕ ರಘುಪತಿ ಭಟ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್‌, ರಿಶಾನ್ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತಾಜುದ್ದೀನ್ ಶೇಖ್ ಪುತ್ರನಾಗಿದ್ದಾನೆ. ಇನ್ನೂ ತಾಜುದ್ದೀನ್ ಶೇಖ್ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು. ಪ್ರಮೋಶನ್ ಕೊಟ್ಟು ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುತ್ತಾರೆಯೇ ಅಥವಾ ಸ್ಥಾನದಿಂದ ಉಚ್ಚಾಟನೆ ಮಾಡುತ್ತಾರೆಯೇ ಎಂದು ಪ್ರಶ್ನಿಸಿದರು.

- Advertisement -
spot_img

Latest News

error: Content is protected !!