- Advertisement -


- Advertisement -
ದಸರಾ ಕಾರ್ಯಕ್ರಮದಲ್ಲಿ ಹುಲಿವೇಷದ ಬಣ್ಣ ಹಾಕಿ ಖುಷಿಯಿಂದ ಹೆಜ್ಜೆ ಹಾಕುತ್ತಿದ್ದ ಕಲಾವಿದ ರಾಕೇಶ್ (29 ವರ್ಷ ) ಮಂಗಳವಾರದಂದು ರಾತ್ರಿ ನೇಣಿಗೆ ಶರಣಾಗಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತೀರ್ಥಹಳ್ಳಿಯ ಸೀಬಿನಕೆರೆ ನಿವಾಸಿಯಾಗಿದ್ದ ರಾಕೇಶ್ ಉಡುಪಿಯಲ್ಲಿ ಡಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ಮೂರ್ನಾಲ್ಕು ವರ್ಷದಿಂದ ದಸರಾ ಕಾರ್ಯಕ್ರಮದಲ್ಲಿ ಹುಲಿವೇಷ ಹಾಕಿ ಹೆಜ್ಜೆ ಹಾಕುತ್ತಿದ್ದರು.
ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


