- Advertisement -
![]()
- Advertisement -
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಅರುಣ್ ಕುಮಾರ್ ಪುತ್ತಿಲ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ಮತ್ತು ನಂತರ ನಡೆದಿರುವ ಆರೋಪ ಪ್ರತ್ಯಾರೋಪಗಳು ಜನತೆಯ ಮುಂದಿರುವುದು ನಮಗೆಲ್ಲ ತಿಳಿದ ವಿಚಾರ, ಚುನಾವಣಾ ಸಂದರ್ಭ 3.5 ಕೋಟಿ ರೂ. ವ್ಯವಹಾರದ ಆಪಾದನೆ ಮತ್ತು ಅದರ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಹೇಳಿರುವ ವಿಚಾರಕ್ಕೆ ಇಂದು ಕೂಡ ಬದ್ಧನಾಗಿದ್ದೇನೆ. ಆದರೆ ಈ ರೀತಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ನಾನು ಭಾವಿಸಿದ್ದೇನೆ. ಮುಂದಿನ ದಿನಗಳಲ್ಲೂ ಇದೇ ರೀತಿಯ ರಾಜಕೀಯ ಷಡ್ಯಂತ್ರ ತಡೆಯುವ ಬಗ್ಗೆ ಹಿರಿಯರ ಹಾಗೂ ಅಧಿಕಾರಿಗಳ ಸೂಚನೆಯಂತೆ ಕಾನೂನಿನ ಚೌಕಟ್ಟಿನಲ್ಲಿ ಮುಂದುವರಿಯುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.
- Advertisement -


