Saturday, May 4, 2024
Homeಕರಾವಳಿಪುತ್ತೂರು; ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಕ್ಷಯ್ ಕಲ್ಲೇಗ ನಿವಾಸಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಪುತ್ತೂರು; ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಕ್ಷಯ್ ಕಲ್ಲೇಗ ನಿವಾಸಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

spot_img
- Advertisement -
- Advertisement -

ಪುತ್ತೂರು; ಸೋಮವಾರ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕಲ್ಲೇಗ ಟೈಗರ್ಸ್ ರೂವಾರಿ ಅಕ್ಷಯ್ ಕಲ್ಲೇಗ ಅವರ ನಿವಾಸಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ವೇಳೆ ಅಕ್ಷಯ್ ತಂದೆ  ತಪ್ಪಿಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. ಆರೋಪಿಗಳು ಎರಡು ಮೂರು ತಿಂಗಳು ಜೈಲಿನಲ್ಲಿ ಇದ್ದು ಹೊರಗೆ ಬರ್ತಾರೆ. ಮತ್ತೆ ಅದೇ ಕೆಲ್ಸ ಮಾಡ್ತಾರೆ. ಹಾಗಾಗಿ ಅದು ಆಗ್ಬಾರ್ದು ಅಂತಾ ಒತ್ತಾಯಿಸಿದರು.

ಇದೇ ವೇಳೆ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಘಟನೆ ನಡೆದ ದಿನವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿದ್ದೇನೆ. ಅಕ್ಷಯ್ ಕಲ್ಲೇಗ ಕೊಲೆ ಆರೋಪಿಗಳಿಗೆ ಕಾನೂನು ಪ್ರಕಾರ ಸೂಕ್ತ ಶಿಕ್ಷೆ ಆಗಬೇಕು.ಪುತ್ತೂರಿನಲ್ಲಿ ಠಾಣೆಯ ಹಿಡಿತದಲ್ಲಿರುವ ಸಿಸಿಟಿವಿಗಳು ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಮಾಧ್ಯಮಗಳಿಂದ ಗೊತ್ತಾಗಿದೆ ಎಂದರು.

ಇಲಾಖೆ ಆದಷ್ಟು ಶೀಘ್ರ ಪುತ್ತೂರಿನ ಸಿಸಿಟಿವಿಗಳನ್ನು ಸರಿ ಮಾಡಿ ರಾತ್ರಿ ಹೊತ್ತು ಗಸ್ತು ಹೆಚ್ಚಿಸಬೇಕು.ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಯಾರು ಪಾಲ್ಗೊಂಡರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

- Advertisement -
spot_img

Latest News

error: Content is protected !!