Thursday, June 4, 2026
Homeಕರಾವಳಿಮಂಗಳೂರುಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡಲು ವಿಚಾರಣೆಗೆ ಸೂಚನೆ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡಲು ವಿಚಾರಣೆಗೆ ಸೂಚನೆ

- Advertisement -
- Advertisement -

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6 ರಂದು ವಿಚಾರಣೆಯನ್ನು ನಿಗದಿ ಮಾಡಿದ್ದಾರೆ. ಅಲ್ಲದೇ ಈ ವಿಚಾರಣೆಗೆ ಅರುಣ್‌ ಕುಮಾರ್‌ ಪುತ್ತಿಲ ಅವರು ತಪ್ಪದೇ ಹಾಜರಾಗಲು ಸೂಚನೆ ನೀಡಲಾಗಿದೆ.

ಈ ಪ್ರಕರಣದ ಪ್ರಕಾರ ಸ್ವತಃ ಅರುಣ್‌ಕುಮಾರ್‌ ಪುತ್ತಿಲ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಹೇಳಲಾಗಿರುವ ಕುರಿತು ವರದಿಯಾಗಿದೆ.

ಒಂದು ವೇಳೆ ಅರುಣ್‌ ಕುಮಾರ್‌ ಪುತ್ತಿಲ ಅವರು ವಿಚಾರಣೆಗೆ ಹಾಜರಾಗದೇ ಇದ್ದ ಪಕ್ಷದಲ್ಲಿ ಈ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ ಏಕಪಕ್ರಿಯವಾಗಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

- Advertisement -

Latest News

error: Content is protected !!