Saturday, June 28, 2025
Homeಕರಾವಳಿಮಂಗಳೂರುಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ; ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಅರುಣ್ ಕುಮಾರ್ ಪುತ್ತಿಲ ಪ್ರಾರ್ಥನೆ

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ; ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಅರುಣ್ ಕುಮಾರ್ ಪುತ್ತಿಲ ಪ್ರಾರ್ಥನೆ

spot_img
- Advertisement -
- Advertisement -

ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ವಿರುದ್ಧದ ಎಲ್ಲಾ ತನಿಖೆಗೆ ಹೈಕೋರ್ಟ್ ನಿಂದ ತಡೆಯಾಜ್ಞೆ ಸಿಕ್ಕಿರುವ ಹಿನ್ನೆಲೆಯಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದೇ ವೇಳೆ ಹೇಳಿಕೆ ನೀಡಿರುವ ಅರುಣ್ ಕುಮಾರ್ ಪುತ್ತಿಲ,ಪುತ್ತೂರಿನಲ್ಲಿ ಈ ಹಿಂದೆ ನಡೆದ ಎಲ್ಲಾ ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆದಿದ್ದು, ಮಹಾಲಿಂಗೇಶ್ವರ ದೇವರ ಮೇಲೆ ನಂಬಿಕೆ ಇದೆ, ಜಿಲ್ಲೆಯಲ್ಲಿ ಬಿಜೆಪಿಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಸಂತ್ರಸ್ಥೆ ಮಹಿಳೆ ಕೂಡಾ ನ್ಯಾಯ ಸಿಗಬೇಕೆಂದು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.ಮಹಿಳೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರು ಪುತ್ತಿಲ ಪರವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ

ಕೆಲವು ದಿನಗಳ ಹಿಂದೆ ಶಿರಸಿ ಮೂಲದ ಮಹಿಳೆ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದರು. ‌ಇದಾದ ಬಳಿಕ ಕೋರ್ಟ್ ಪುತ್ತಿಲ ವಿರುದ್ಧದ ಎಲ್ಲಾ ತನಿಖೆಗಳಿಗೆ ತಡೆ ನೀಡಿತ್ತು.

- Advertisement -
spot_img

Latest News

error: Content is protected !!