- Advertisement -
- Advertisement -
ಬೆಂಗಳೂರು : ಬಿಗ್ ಬಾಸ್ ಮನೆಯಲ್ಲಿ ಪ್ರಬಲ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ಅರುಣ್ ಸಾಗರ್ ದಿಢೀರ್ ಅಂತಾ ಬಿಗ್ ಬಾಸ್ ಮನೆಯಿಂದ ಹೊರ ನಡೆದಿದ್ದಾರೆ.
ಅರುಣ್ ಪುತ್ರಿ ಅದಿತಿ ಸಾಗರ್ ಬಿದ್ದು ಗಲ್ಲಕ್ಕೆ ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವನ್ನು ಬಿಗ್ ಬಾಸ್ ಅರುಣ್ ಸಾಗರ್ ಅವರಿಗೆ ತಿಳಿಸಿದ್ದು, ಅವರು ದೊಡ್ಮನೆಯಿಂದ ಹೊರ ನಡೆದಿದ್ದಾರೆ.
ಅದಿತಿ ತಲೆ ಸುತ್ತಿ ಬಿದ್ದಿದರಿಂದಾಗಿ ದವಡೆ ಭಾಗಕ್ಕೆ ಪೆಟ್ಟಾಗಿತ್ತು, ಈ ಹಿನ್ನೆಲೆಯಲ್ಲಿ ವೈದ್ಯರು ಶಸ್ತ್ರ ಚಿಕಿತ್ಸೆಗೆ ಸೂಚಿಸಿದ್ದರು ಎನ್ನಲಾಗಿದೆ. ಈಗ ಆಕೆಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಆಗಿರುವ ಹಿನ್ನೆಲೆಯಲ್ಲಿ ಮತ್ತೆ ಬಿಗ್ ಬಾಸ್ ಮನೆಗೆ ಅರುಣ್ ಸಾಗರ್ ಸೇರಿಕೊಂಡಿದ್ದಾರೆ ಎನ್ನಲಾಗಿದೆ.
- Advertisement -