ದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರೊನಾ ಸೋಂಕು ವಿಪರೀತ ಪ್ರಸರಣವಾಗುತ್ತಿದೆ. ಕಳೆದ ಒಂದು ವಾರದಿಂದ ಪ್ರತಿದಿನ 1000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.
ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನೆನ್ನೆ ಮಧ್ಯಾಹ್ನದಿಂದ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದು, ನಾಳೆ ಬೆಳಗ್ಗೆ ಕೋವಿಡ್-19 ಪರೀಕ್ಷೆಗೆ ಒಳಗಾಗಲಿದ್ದಾರೆ.
ಭಾನುವಾರ ಮಧ್ಯಾಹ್ನದಿಂದ ಅವರಲ್ಲಿ ಜ್ವರ ಹಾಗೂ ಗಂಟಲು ನೋವು ಕಾಣಿಸಿಕೊಂಡಿದ್ದು, ಆಗಿನಿಂದಲೇ ಸೆಲ್ಫ್ ಐಸೋಲೇಟ್ ಆಗಿದ್ದಾರೆ. ತಾವು ನಡೆಸಬೇಕಿದ್ದ ಎಲ್ಲ ಸಭೆಗಳನ್ನೂ ರದ್ದುಗೊಳಿಸಿದ್ದಾರೆ.
ಈ ಮಧ್ಯೆ ಕೇಂದ್ರ ಸರ್ಕಾರದ ವಾರ್ತಾ ಶಾಖೆ – ಪ್ರೆಸ್ ಇನ್ಫರ್ಮೆಷನ್ ಬ್ಯೂರೋ (ಪಿಐಬಿ) ಪ್ರಧಾನ ನಿರ್ದೇಶಕ ಕೆ.ಎಸ್.ಡಲ್ಟಾಲಿಯಾ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೆಹಲಿಯಲ್ಲಿರುವ ಮುಖ್ಯ ಚುನಾವಣಾ ಆಯುಕ್ತರ ಕಚೇರಿಯ ಹಿರಿಯ ಅಧಿಕಾರಿಯೊಬ್ಬರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ.