- Advertisement -
- Advertisement -
ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡೀಸ್ ಪ್ರಥಮ ವರ್ಷದ ಪುಣ್ಯಸ್ಮರಣೆ ಬೆಂಗಳೂರಿನಲ್ಲಿರುವ ಅವರ ಸಮಾಧಿ ಸ್ಥಳದಲ್ಲಿ ನಡೆಯಿತು.
ಪುಣ್ಯಸ್ಮರಣಾ ಕಾರ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ರವರು ಭಾಗವಹಿಸಿ ಗೌರವ ನಮನವನ್ನು ಸಲ್ಲಿಸಿದರು.
ನಂತರ ಆಸ್ಕರ್ ಫೆರ್ನಾಂಡಿಸ್ ಅವರ ಕುಟುಂಬ ಸದಸ್ಯರ ಉಪಸ್ಥಿತಿಯಲ್ಲಿ ಸೈಂಟ್ ಪ್ಯಾಟ್ರಿಕ್ಸ್ ಕ್ಯಾಥೊಲಿಕ್ ಚರ್ಚ್ನಲ್ಲಿ ನಡೆದ ಪ್ರಾಥನಾ ಸಭೆಯಲ್ಲಿಯೂ ಭಾಗವಹಿಸಿದರು.
ಮಾಜಿ ಸಚಿವರಾದ ಬಿ. ರಮಾನಾಥ ರೈ, ಬೆಂಗಳೂರು ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್, ಮಾಜಿ ಶಾಸಕ ಜೆ.ಆರ್. ಲೋಬೋ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.
- Advertisement -