- Advertisement -
- Advertisement -
ಪುತ್ತೂರು; ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವಿಳಂಬವಾಗಿದ್ದಕ್ಕೆ ಅಧಿಕಾರಿಗಳು ಹಾಗೂ ಗುತ್ತಿಗೆದಾರನನ್ನು ಶಾಸಕ ಅಶೋಕ್ ರೈ ತರಾಟೆದೆ ತೆಗೆದುಕೊಂಡ ಘಟನೆ ನಡೆದಿದೆ.
ಮಳೆಗಾಲ ಆರಂಭವಾದರೂ ಡ್ರೈನೇಜ್ ಸಮಸ್ಯೆ ಸರಿಪಡಿಸದೇ ವಿಳಂಬವಾಗಿದೆ ಎಂದು ಸ್ಥಳಕ್ಕೆ ಭೇಟಿ ಪರಿಶೀಲಿಸಿದ ಶಾಸಕರು ಮೂರು ವರ್ಷದಿಂದ ಕಾಮಗಾರಿ ನಡೆಯುತ್ತಿದ್ದರೂ ಅವ್ಯವಸ್ಥೆಯಾಗಿದೆ, ಎಷ್ಟು ದಿನದಲ್ಲಿ ಕೆಲಸ ಮುಗಿಸ್ತೀರಿ ಅಂತ ಹೇಳಿ, ‘ನನ್ನನ್ನ ಸಮಾಧಾನ ಮಾಡಲು ನೀವು ಹೇಳೋದು ಬೇಡ’, ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಅಶೋಕ್ ರೈಗೆ ವೋಟ್ ಹಾಕಿ ಸಮಸ್ಯೆ ಆಯ್ತು ಅಂತ ಜನ ಹೇಳಬಾರದು, ನಿಮಗೆ ಆಗುತ್ತಾ ಇಲ್ವಾ ಹೇಳಿ, ಯಾವಾಗ ಮುಗಿಸ್ತೀರಾ ಹೇಳಿ ಅಂತಾ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ
- Advertisement -