- Advertisement -
- Advertisement -
ಪುತ್ತೂರು: ದಾಖಲೆಗಾಗಿ ಮಹಿಳೆಯನ್ನು ಅಲೆದಾಡಿಸುತ್ತಿದ್ದ ಅಧಿಕಾರಿಗೆ ಶಾಸಕ ಅಶೋಕ್ ಕುಮಾರ್ ರೈ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ.
ಮಹಿಳೆಯನ್ನು ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ ಅಲೆಡಾಡಿಸುತ್ತಿದ್ದ ವಿಚಾರ ತಿಳಿದ ಶಾಸಕ ಅಶೋಕ್ ಕುಮಾರ್ ರೈ ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ನುಗ್ಗಿದ್ದಾರೆ. ಮಹಿಳೆಯ ದಾಖಲೆ ಪತ್ರಗಳನ್ನು ತಕ್ಷಣವೇ ನೀಡುವಂತೆ ವಾರ್ನ್ ಮಾಡಿದ್ದಾರೆ.
ಇಂಥ ಕೆಲಸಗಳು ಇಂದಿಗೇ ಕೊನೆಯಾಗಬೇಕು, ಬಡವರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡಬಾರದು, ಮುಂದೆ ಇಂಥಹ ಘಟನೆ ನಡೆದಲ್ಲಿ ಸುಮ್ಮನೆ ಕೂರುವುದಿಲ್ಲಎಂದು ಶಾಸಕ ಅಶೋಕ್ ಕುಮಾರ್ ಅಧಿಕಾರಿಗೆ ಕ್ಲಾಸ್ ತೆಗದುಕೊಂಡಿದ್ದಾರೆ.
- Advertisement -