Friday, June 5, 2026
Homeಕರಾವಳಿಮಂಗಳೂರು: ನೈತಿಕ ಪೊಲೀಸ್ ಗಿರಿ, ನಾಲ್ವರು ಆರೋಪಿಗಳ ಬಂಧನ

ಮಂಗಳೂರು: ನೈತಿಕ ಪೊಲೀಸ್ ಗಿರಿ, ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು: ಶನಿವಾರ ನೈತಿಕ ಪೊಲೀಸ್ ಪ್ರಕರಣದ ಬಗ್ಗೆ ಆರೋಪಿಸಿ, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಪ್ರಕಾಶ್, ರಂಜಿತ್, ರಾಘವೇಂದ್ರ ಮತ್ತು ಪವನ್ ಎಂದು ಗುರುತಿಸಲ್ಪಟ್ಟಿದ್ದಾರೆ. ನೈತಿಕ ಪೊಲೀಸ್ ಘಟನೆಯು ಶುಕ್ರವಾರ ಡಿಸೆಂಬರ್ 10 ರಂದು ಬಸ್ನಲ್ಲಿ ನಡೆಯಿತು.

ವಾಮಂಜೂರ್ ಸಮೀಪವಿರುವ ಖಾಸಗಿ ಕಾಲೇಜಿನಲ್ಲಿ ಅಧ್ಯಯನ ಮಾಡುವ ಹುಡುಗ ಮತ್ತು ಹುಡುಗಿ, ಉಡುಪಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಭಿನ್ನ ಕೋಮಿನ ಯುವಕ ಮತ್ತು ಯುವತಿಯನ್ನು ಗದರಿಸಿದ ಹಾಗೂ ಅವರ ಭಾವಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚುವ ಮೂಲಕ ಯುವತಿಯ ಗೌರವಕ್ಕೆ ದಕ್ಕೆ ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು .

ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹಿಂದೆ ತಿಳಿಸಿದಂತೆ, ಪೊಲೀಸರು ಬಸ್ ಕಂಡಕ್ಟರ್ ಮತ್ತು ಇತರರನ್ನು ಒಳಗೊಂಡ ಹಲ್ಲೆ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!