ಬೆಂಗಳೂರು: ನಿರೂಪಕಿ ದಿವ್ಯಾ ವಸಂತ ಜ್ಯೋತಿಷಿ ಆನಂದ್ ಗುರೂಜಿಗೆ ಗ್ಯಾಂಗ್ ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ನಿರೂಪಕಿಯ ಮೇಲೆ ಚಿಕ್ಕಜಾಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದಿವ್ಯಾ ವಸಂತ ಜ್ಯೋತಿಷಿ ಆನಂದ್ ಗುರೂಜಿಗೆ ಅಶ್ಲೀಲ ವಿಡಿಯೋ ಬಿಡುಗಡೆ ಮಾಡುವ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
ಇನ್ನು ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆಂದು ಆನಂದ್ ಗುರೂಜಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಇದೀಗ ಬಂಧನ ಭೀತಿಯಿಂದ ದಿವ್ಯಾ ವಸಂತ ಮತ್ತು ಕೃಷ್ಣಮೂರ್ತಿ ನಾಪತ್ತೆಯಾಗಿದ್ದಾರೆ.
ಪ್ರಕರಣದ ವಿವರ: ಆನಂದ್ ಗುರೂಜಿಗೆ ತಮ್ಮಅಶ್ಲೀಲ ವಿಡಿಯೋಯಿದೆ ಎಂದು ಬ್ಲಾಕ್ಮೇಲ್ ಮಾಡಿ, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡೋದಾಗಿ ದಿವ್ಯಾ ವಸಂತ ಬೆದರಿಕೆ ಹಾಕಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರಂತೆ. ಈ ಬಗ್ಗೆ ಏಪ್ರಿಲ್ 18ರಂದೇ ಚಿಕ್ಕಜಾಲ ಠಾಣೆಯಲ್ಲಿ FIR ದಾಖಲಾಗಿದ್ದು, ಆರೋಪಿಗಳಿಗೆ ವಿಚಾರಣೆಗೆ ಬರುವಂತೆ ನೋಟಿಸ್ ಕೂಡ ನೀಡಲಾಗಿದೆ.
ಇನ್ನು ಗುರೂಜಿಯು ಹಣ ಕೊಡದೇ ಇದ್ದಿದ್ದಕ್ಕೆ ಅವರಿಗೆ ಕೊಲೆ ಬೆದರಿಕೆ, ಜೊತೆಗೆ ಯುಟ್ಯೂಬ್ ಚಾನಲ್ ಸಾಮ್ರಾಟ್ ಟಿವಿ ಮತ್ತು ಹೆಸರಿನ ಯೂಟ್ಯೂಬ್ ಚಾನೆಲ್ ಗಳಲ್ಲಿ ಚಾರಿತ್ರ್ಯ ತೇಜೋವಧೆ ಮೂಲಕ ಮಾನಹಾನಿ ಸುದ್ದಿ ಪ್ರಸಾರ ಮಾಡಿದ್ದಾರೆ. ನನಗೆ ಮೇಲಿಂದ ದಿವ್ಯ ವಸಂತ ಮತ್ತು ಗ್ಯಾಂಗ್ ನಿಂದ ಮೇಲಿಂದ ಮೇಲೆ ಬ್ಲ್ಯಾಕ್ಮೇಲ್ ಆಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.