ಕಡಬ: ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ ನಡೆಯಿತು. ಸಮಾರಂಭದಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಸಚಿವ ಎಸ್. ಅಂಗಾರ ಭಾಗವಹಿಸಿದ್ದರು.
ಇದೇ ವೇಳೆ ಇತ್ತೀಚೆಗೆ 75ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿದ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಯವರ ಅಭಿನಂದನಾ ಗ್ರಂಥ ಅಮೃತರಶ್ಮಿ ಪುಸ್ತಕ ಬಿಡುಗಡೆ ಹಾಗೂ ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಆಯ್ಕೆಯಾದ ಪಿ.ಬಿ. ಹರೀಶ್ ರೈಯವರಿಗೆ ನಡೆದ ಅಭಿನಂದನೆ ಕೂಡಾ ನಡೆಯಿತು.
ಕಾರ್ಯಕ್ರಮದಲ್ಲಿ ಸವಣೂರು ಸೀತಾರಾಮ ರೈ, ದ.ಕ. ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಧರ್ ರೈ ಬಾಲ್ಯೊಟ್ಟು, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕ ಅಶ್ವಿನ್ ಶೆಟ್ಟಿ, ರಶ್ಮಿ ಅಶ್ವಿನ್ ಶೆಟ್ಟಿ, ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜೀವಿ ರೈ, ಸುಂದರ ರೈ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.