- Advertisement -
- Advertisement -
ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಮರ್ಲೇನಾ ಅವರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಶನಿವಾರದಂದು ಪ್ರಮಾಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಪ್ರಮಾಣವಚನ ಬೋಧಿಸಿದರು.
ಸಚಿವರಾಗಿ ಇದೇ ವೇಳೆಯಲ್ಲಿ ಸೌರಭ್ ಭಾರದ್ವಾಜ್, ಗೋಪಾಲ್ ರಾಯ್, ಇಮ್ರಾನ್ ಹುಸ್ಸೇನ್, ಕೈಲಾಶ್ ಗೆಹ್ಲೋತ್ ಮತ್ತು ಮುಖೇಶ್ ಅಹ್ಲಾವತ್ ಅವರು ಪ್ರಮಾಣ ಮಾಡಿದರು.
ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿರುವ ಅರವಿಂದ ಕೇಜ್ರಿವಾಲ್ ಅವರು ಕಳೆದವಾರವಷ್ಟೇ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕೇಜ್ರಿವಾಲ್ ಅವರು ರಾಜೀನಾಮೆ ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ತಮ್ಮ ಉತ್ತರಾಧಿಕಾರಿಯಾಗಿ ಆತಿಶಿ ಅವರ ಹೆಸರನ್ನು ಘೋಷಿಸಿದ್ದರು. ಈ ನಿರ್ಧಾರವನ್ನು ಪಕ್ಷವು ಸರ್ವಾನುಮತದಿಂದ ಅಂಗೀಕರಿಸಿತ್ತು.
- Advertisement -