- Advertisement -
- Advertisement -
ಉಡುಪಿ: ದುಷ್ಕರ್ಮಿಗಳ ತಂಡವೊಂದು ಬಾರ್ ಮಾಲೀಕ ಮೇಲೆ ಹಲ್ಲೆ ಮಾಡಿರುವ ಘಟನೆ ಸಾಲಿಗ್ರಾಮದ ಚಿತ್ರಪಾಡಿಯಲ್ಲಿರುವ ನರ್ತಕಿ ಬಾರ್ ನಲ್ಲಿ ನಡೆದಿದೆ. ಸಾಲಿಗ್ರಾಮದ ಚಿತ್ರಪಾಡಿ ಬಳಿ ಇರುವ ನರ್ತಕಿ ಬಾರ್ ನಲ್ಲಿ ಈ ಗಲಾಟೆ ನಡೆದಿದ್ದು, ಬಾರ್ ಮಾಲೀಕ ರಿತೇಶ್ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮದ್ಯ ಸೇವನೆ ಮಾಡುವ ನೆಪದಲ್ಲಿ ಬಂದಿದ್ದ 5 ಮಂದಿ ದುಷ್ಕರ್ಮಿಗಳು, ಅನಾವಶ್ಯಕವಾಗಿ ಗಲಾಟೆ ಎಬ್ಬಿಸಿ ಬಾರ್ ಮಾಲೀಕ ರಿತೇಶ್ನನ್ನು ನೆಲಕುರುಳಿಸಿ ಚಪ್ಪಲಿಯಿಂದ ತುಳಿದ ಹಲ್ಲೆ ನಡೆಸಿದ್ದಾರೆ.
ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಐದು ಮಂದಿಯನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತರನ್ನು ರೋಹಿತ್, ರಂಜಿತ್, ಸಚಿನ್ ಶಶಾಂಕ್ ವಿಘ್ನೇಶ್ ಎಂದು ಗುರುತಿಸಲಾಗಿದೆ.
- Advertisement -