Saturday, June 6, 2026
Homeಕರಾವಳಿಬೆಳ್ತಂಗಡಿ : ಕಳೆಂಜ ಬಿಜೆಪಿ ಮುಖಂಡನ ಮೇಲೆ ಮಾರಕಾಸ್ತ್ರದಿಂದ ದಾಳಿ?

ಬೆಳ್ತಂಗಡಿ : ಕಳೆಂಜ ಬಿಜೆಪಿ ಮುಖಂಡನ ಮೇಲೆ ಮಾರಕಾಸ್ತ್ರದಿಂದ ದಾಳಿ?

- Advertisement -
- Advertisement -

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಮ್.ಕೆ(33) ಮೇಲೆ ಕಾಂಗ್ರೆಸ್ ಮುಖಂಡ ಮಾರಕಾಸ್ರ್ರದಿಂದ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯರ್ತಡ್ಕದಲ್ಲಿ ಕಾಂಗ್ರೆಸ್ ಮುಖಂಡ ಕುಶಲಪ್ಪ ಗೌಡ ಕಜೆ ಎಂಬಾತ ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸದ್ಯ ರಾಜೇಶ್ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ವಸಂತ್ ಅಚಾರ್ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ‌.‌ ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದೌಡಾಯಿಸಿದ್ದಾರೆ.

- Advertisement -

Latest News

error: Content is protected !!