Sunday, June 23, 2024
Homeಕರಾವಳಿಮಂಗಳೂರು: ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಮಂಗಳೂರು: ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

spot_img
- Advertisement -
- Advertisement -

ಮಂಗಳೂರು: ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಸುರತ್ಕಲ್ ಕಾಟಿಪಳ್ಳ 6ನೇ ಬ್ಲಾಕ್ ನಲ್ಲಿ ನಡೆದಿದೆ.

ನಿನ್ನೆ ರಾತ್ರಿ ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕಾಟಿಪಳ್ಳ ಉಮರ್ ಎಂಬವರ ಪುತ್ರ ಶಯಾನ್ ಹಲ್ಲೆಗೊಳಗಾದ ಬಾಲಕ. ಈತ ತೌಯಿಬಾ ಮಸೀದಿಯ 6ನೇ ತರಗತಿಯ ವಿದ್ಯಾರ್ಥಿ ಯಾಗಿದ್ದ.

ಶಯಾನ್ ರಾತ್ರಿ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬೈಕ್ ನಲ್ಲೇ ಬಾಲಕನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಬಾಲಕ ಧರಿಸಿದ್ದ ಮದರಸದ ಸಮವಸ್ತ್ರ ಹರಿದ ಕಾರಣ ದುಷ್ಕರ್ಮಿಗಳ ಕೈಯಿಂದ ತಪ್ಪಿಸಿಕೊಂಡು ಓಡಿಹೋಗಿದ್ದಾನೆ‌.ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

- Advertisement -
spot_img

Latest News

error: Content is protected !!