Tuesday, July 1, 2025
Homeಕರಾವಳಿಉಡುಪಿಉಡುಪಿ:  ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ

ಉಡುಪಿ:  ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ

spot_img
- Advertisement -
- Advertisement -

ಉಡುಪಿ :  ಬಸ್‌ಗೆ  ಬಸ್‌ ಅನ್ನು ಅಡ್ಡವಿಟ್ಟು ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಬಸ್ ನ್ನು ಅಡ್ಡಗಟ್ಟಿ ಹಲ್ಲೆ ಮಾಡಲಾಗಿದೆ.

ಬಸ್‌ ಚಾಲಕ ಉಚ್ಚಿಲ ಭಾಸ್ಕರ ನಗರ ನಿವಾಸಿ ಸಂಶೀರ್‌ ಅಹಮದ್‌ (28) ಹಲ್ಲೆಗೊಳಗಾಗಿದ್ದು, ಇವರ ಮೇಲೆ ಮತ್ತೂಂದು ಬಸ್‌ನಲ್ಲಿದ್ದ ಮೂವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

ಜೂ. 24ರಂದು ಸಂಶೀರ್‌ ಅಹಮ್ಮದ್‌ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿ ಕಡೆಯಿಂದ ಕಟೀಲು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಬಸ್‌ನ್ನು ಮೂಳೂರು ಸುನ್ನಿ ಸೆಂಟರ್‌ ಬಳಿ ಓವರ್‌ಟೇಕ್‌ ಮಾಡಿಕೊಂಡು ಬಂದು ಬಸ್ಸಿಗೆ ಅಡ್ಡ ನಿಲ್ಲಿಸಿ ಬಸ್ಸಿನಿಂದ ಇಳಿದ ರಾಯಿಜ್‌, ಸಮೀರ್‌ ಡಿಜಿ ಮತ್ತು ಹಾಸೀಮ್‌ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಆರೋಪಿಗಳು ಬಸ್ಸಿಗೆ ಹತ್ತಿ ಚಾಲಕನ ಕಾಲರ್‌ಪಟ್ಟಿ ಹಿಡಿದು ಕೈಯಿಂದ ಹೊಡೆಯುತ್ತಿರುವಾಗ ಮತ್ತೊಂದು ಕಾರಿನಲ್ಲಿ ಬಂದ ಸಲೀಂ, ಜಪ್ಟಲ್‌ ಖಾದರ್‌ ಮತ್ತು ಇನ್ನೊಬ್ಬ ವ್ಯಕ್ತಿ ಬಸ್ಸನ್ನು ಹತ್ತಿ ಅವಾಚ್ಯ ಶಬ್ದದಿಂದ ಬೈದು, ಬಸ್‌ನ ಕೀ ತೆಗೆದು ದೂಡಿ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -
spot_img

Latest News

error: Content is protected !!