Friday, May 17, 2024
Homeಕರಾವಳಿಮಂಗಳೂರುಧರ್ಮಸ್ಥಳ: ಅಕ್ರಮ ಮರಳುಗಾರಿಕೆ ವಿಚಾರದಲ್ಲಿ  ಬಸ್ ಡ್ರೈವರ್ ಗೆ ತಂಡವೊಂದರಿಂದ ಹಲ್ಲೆ

ಧರ್ಮಸ್ಥಳ: ಅಕ್ರಮ ಮರಳುಗಾರಿಕೆ ವಿಚಾರದಲ್ಲಿ  ಬಸ್ ಡ್ರೈವರ್ ಗೆ ತಂಡವೊಂದರಿಂದ ಹಲ್ಲೆ

spot_img
- Advertisement -
- Advertisement -

ಧರ್ಮಸ್ಥಳ: ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ತಂಡವೊಂದು  ಬಸ್ ಡ್ರೈವರ್  ಮೇಲೆ  ಹಲ್ಲೆ ನಡೆಸಿದ ಘಟನೆ  ಪುದುವೆಟ್ಟು ಸಮೀಪ ನಡೆದಿದೆ. ಬೊಲ್ಮನಾರು ಮನೆ ನಿವಾಸಿ ಹರೀಶ್ ಕುಮಾರ್ (37) ಹಲ್ಲೆಗೊಳಗಾದವರು. ಎ 23ರಂದು ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಕರ್ತವ್ಯಕ್ಕೆ ರಜೆ ಇದ್ದ ದಿನ ಹರೀಶ್ ಕುಮಾರ್ ಕಳೆಂಜ ಗ್ರಾಮದ ಮಾಣಿಗೇರಿ ಹೊಳೆ ಎಂಬಲ್ಲಿ ಜೀಪು ತೊಳೆಯುತ್ತಿದ್ದ ವೇಳೆ ರಾತ್ರಿ 8.30 ಸುಮಾರಿಗೆ ಸ್ಥಳೀಯರಾದ ಪ್ರಸನ್ನ, ಅಚ್ಚು, ಶಿವಪ್ಪ, ಉಮೇಶ್ ಗೌಡ ಎಂಬವರು ಇಲ್ಲಿಗೆ ಬಂದು ತನ್ನ ಕೈಯಿಂದ ಹಾಗೂ ಕಲ್ಲಿನಿಂದ  ಹಲ್ಲೆ ನಡೆಸಿದ್ದಾರೆ. ಬಳಿಕ ಜೀಪನ್ನು ಅಲ್ಲಿಂದ ಮಾಣಿಗೇರಿ ರಸ್ತೆಯ ಸಮೀಪ ತಂದಿಟ್ಟು ಜೀಪಿನ ಟಯರ್ ಗಳ ಗಾಳಿಯನ್ನು ತೆಗೆಸಿದ್ದಾರೆ . ಅಲ್ಲಿಗೆ ಬಂದ ಹರೀಶ್ ಅದನ್ನು ಪ್ರಶ್ನಿಸಿದಾಗ ಮತ್ತೆ ಅವರ ಮೇಲೆ ಹಲ್ಲೆ ನಡೆಸಿದ್ದು ಹೊಯ್ಗೆ ಬಗ್ಗೆ ತಕರಾರು ತೆಗೆದರೆ ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದು ಬೊಬ್ಬೆ ಕೇಳಿ ಇತರರು ಬರುವುದನ್ನು ನೋಡಿ ಸ್ಥಳದಿಂದ ಪರಾರಿಯಾಗಿದ್ದರೆ. ಎಂದು ಧರ್ಮಸ್ಥಳ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.  ಹಲ್ಲೆಯಿಂದ ಗಾಯಗೊಂಡಿರುವ ಇವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಕಲಂ 341,323, 324, 504, 506, ಹಾಗೂ 34 ಐ.ಪಿ.ಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!