- Advertisement -
- Advertisement -
ಉಪ್ಪಿನಂಗಡಿ: ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ತಿಳಿದು ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಎರಡು ದೋಣಿ, ಒಂದು ಹಿಟಾಚಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸರಳೀಕಟ್ಟೆ ಬಳಿಯ ಹೊಸಮೊಗ್ರು ಎಂಬಲ್ಲಿ ನಡೆದಿದೆ.
ಇಲ್ಲಿನ ನೇತ್ರಾವತಿ ದಡದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಅಧಿಕಾರಿಗಳು ಮರಳು ತೆಗೆಯಲು ಬಳಸುತ್ತಿದ್ದ ಎರಡು ದೋಣಿ ಹಾಗೂ ಒಂದು ಹಿಟಾಚಿ ಮತ್ತು ಡ್ರಿಜ್ಜಿಂಗ್ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.
- Advertisement -