Sunday, May 19, 2024
Homeಕರಾವಳಿಉಳ್ಳಾಲ: ಡಿಸಿಪಿ ನೇತೃತ್ವದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ; ಇಬ್ಬರ ಬಂಧನ!

ಉಳ್ಳಾಲ: ಡಿಸಿಪಿ ನೇತೃತ್ವದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ; ಇಬ್ಬರ ಬಂಧನ!

spot_img
- Advertisement -
- Advertisement -

ಉಳ್ಳಾಲ: ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ಡಿಸಿಪಿ ನೇತೃತ್ವದ ತಂಡ ದಾಳಿ ನಡೆಸಿ ಎರಡು ಲಾರಿ, ಮೂರು ಬೈಕ್ ಸೇರಿದಂತೆ ಇಬ್ಬರನ್ನು ಬಂಧಿಸಿರುವ ಘಟನೆ ಉಚ್ಚಿಲ ಸೋಮೇಶ್ವರ ಬಳಿ ನಡೆದಿದೆ.

ಕಲ್ಲಾಪು ನಿವಾಸಿ ಮಯ್ಯದ್ದಿ, ತಲಪಾಡಿ ನಿವಾಸಿ ಒಸ್ವಾಲ್ ಡಿಸೋಜ ಬಂಧಿತ ಆರೋಪಿಗಳು. ಈ ಪ್ರದೇಶದಲ್ಲಿ ತಡರಾತ್ರಿ ವೇಳೆ ಅಕ್ರಮ ಮರಳು ಸಾಗಾಟ ವ್ಯಾಪಕಗೊಂಡ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ವತಃ ಡಿಸಿಪಿ ಅವರೇ ಸ್ಥಳೀಯ ಪೊಲೀಸರ ನೆರವಿನಲ್ಲಿ ಅಕ್ರಮ ಮರಳು ಅಡ್ಡೆಗೆ ಮಂಗಳವಾರ ತಡರಾತ್ರಿ 12.30ರ ಸುಮಾರಿಗೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 2 ಲಾರಿ, 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ವೇಳೆ ಸ್ಥಳದಲ್ಲಿದ್ದ ಎಂಟು ಮಂದಿ ಪರಾರಿಯಾಗಿದ್ದಾರೆ.ಈ ಕುರಿತು ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -
spot_img

Latest News

error: Content is protected !!