- Advertisement -
- Advertisement -
ಬೆಳ್ತಂಗಡಿ : ಜೂ.2 ರಂದು ಸಂಜೆ ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ದೂರುದಾರ ಮಹಿಳೆಯ ಮಗನಾದ ಕರುಣಾಕರ ಗೌಡ ಎಂಬವನಿಗೆ ಆರೋಪಿಗಳಾದ ಅಶ್ವಥ್ ಮತ್ತು ಪ್ರಮೋದ್ ಎಂಬವರುಗಳು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೈಯಿಂದ ಹಲ್ಲೆ ನಡೆಸಿರುತ್ತಾರೆ.
ಈ ವೇಳೆ ದೂರುದಾರ ಮಹಿಳೆ ಗಲಾಟೆ ಬಿಡಿಸುವ ಉದ್ದೇಶದಿಂದ ಸದ್ರಿ ಸ್ಥಳಕ್ಕೆ ತೆರಳಿದಾಗ ಆರೋಪಿಗಳು ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿ ಅವರಿಗೂ ಹಲ್ಲೆ ನಡೆಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 323,354, r/w 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಹಲ್ಲೆಗೊಳಗಾದ ಮಹಿಳೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
- Advertisement -