- Advertisement -
- Advertisement -
ಬೆಳ್ತಂಗಡಿ : ಉಜಿರೆಯ ಗುರಿಪಳ್ಳದಲ್ಲಿ ಜಾಗದ ವಿಚಾರದಲ್ಲಿ ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ 21/04/2022 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 143,147,148,323,324,504,354,354(B), 506 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಹಲ್ಲೆ ಮಾಡಿ, ಬಟ್ಟೆ ಎಳೆದಾಡಿ, ಮಾನ ಹಾನಿ ಮಾಡಿದ ಮೂರು ಜನ ಮಹಿಳಾ ಆರೋಪಿಗಳಾದ ಸುಗುಣ, ಕುಸುಮ , ಲಲಿತಾ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿದೆ.
ಪರಾರಿಯಾಗಿರುವ ಉಳಿದ ಆರೋಪಿಗಳನ್ನು ಬಂಧಿಸಲು ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
- Advertisement -