Tuesday, May 7, 2024
Homeಕರಾವಳಿಮಂಗಳೂರು; ;ಚಿನ್ನಾಭರಣ ಮಳಿಗೆಗೆ ನುಗ್ಗಿ ಹಲ್ಲೆ ಪ್ರಕರಣ; ಪ್ರತ್ಯೇಕ‌ ಮೂರು ಪ್ರಕರಣ ದಾಖಲು

ಮಂಗಳೂರು; ;ಚಿನ್ನಾಭರಣ ಮಳಿಗೆಗೆ ನುಗ್ಗಿ ಹಲ್ಲೆ ಪ್ರಕರಣ; ಪ್ರತ್ಯೇಕ‌ ಮೂರು ಪ್ರಕರಣ ದಾಖಲು

spot_img
- Advertisement -
- Advertisement -

ಮಂಗಳೂರಿನ ಕಂಕನಾಡಿಯ ಜುವೆಲ್ಲರಿ ಶಾಪ್ ಒಂದರಲ್ಲಿ ಯಲ್ಲಿ ಬೇರೆ ಬೇರೆ ಕೋಮಿನ ಜೋಡಿ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ‌ ಮೂರು ಪ್ರಕರಣ ದಾಖಲಾಗಿದೆ‌ ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಚಿನ್ನಾಭರಣ ಮಳಿಗೆಯಲ್ಲಿ ಮಾರಾಟ ವಿಭಾಗದ ಇಬ್ಬರು ಸಿಬ್ಬಂದಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿ ಗುಂಪು ಯುವತಿಯ ಪೋಷಕರೊಂದಿಗೆ ಚಿನ್ನಾಭರಣದ ಮಳಿಗೆಗೆ ನುಗ್ಗಿ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ.

68 ಮಳಿಗೆಗೆ ಅಕ್ರಮವಾಗಿ ಪ್ರವೇಶಿಸಿ ದಾಂಧಲೆಗೈದ ಗುಂಪಿನ ವಿರುದ್ಧ ಚಿನ್ನಾಭರಣ ಮಳಿಗೆಯವರು ದೂರು ನೀಡಿದ್ದಾರೆ. ಹಲ್ಲೆಗೊಳಗಾದ ಯುವಕ ತನ್ನ ಮೇಲೆ ಹಲ್ಲೆಯಾಗಿದೆ ಎಂದು ದೂರು ನೀಡಿದ್ದಾನೆ.ಹಾಗೂ ಯುವಕನ ವಿರುದ್ಧ ಯುವತಿಯ ತಾಯಿ ಬೆದರಿಕೆ,ದೌರ್ಜನ್ಯ ದೂರು ನೀಡಿದ್ದಾರೆ.ಅದರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಯಾರನ್ನೂ ಬಂಧಿಸಿಲ್ಲ.ಯುವಕ ಮತ್ತು ಯುವತಿಯನ್ನು ವಿಚಾರಣೆಗೊಳಪಡಿಸಲಾಗಿದೆ. ರಾಜ್ಯಪಾಲರ ಕಾರ್ಯಕ್ರಮದಲ್ಲಿ‌ ಬಂದೋಬಸ್ತ್ ನಲ್ಲಿದ್ದೆ, ಪ್ರಕರಣದ ಮಾಹಿತಿ ಬಂದ ಕೂಡಲೇ ತನಿಖೆಗೆ ಸೂಚಿಸಲಾಗಿದೆ ಎಂದು‌ ಕಮಿಷನರ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!