- Advertisement -
- Advertisement -
ಉಪ್ಪಿನಂಗಡಿ: ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ನಡೆದಿದೆ.
ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೊಳಗಾದ ಯುವಕ. ಹಕೀಂ ಅವರು ಕರ್ವೇಲು ಜಂಕ್ಷನ್ ಬಳಿ ನಿಂತಿದ್ದ ವೇಳೆ ಅಲ್ಲಿಗೆ ಕಾರಿನಲ್ಲಿ ಬಂದ ತಂಡ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ .ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -