- Advertisement -
- Advertisement -
ಉಪ್ಪಿನಂಗಡಿ : ಹನ್ನೆರಡರ ಹರೆಯದ ಬಾಲಕನನ್ನು ಅಪಹರಿಸಲು ಯತ್ನಿಸಿದ ಘಟನೆ ಉಪ್ಪಿನಂಗಡಿಯ ಲಕ್ಷ್ಮೀ ನಗರ ಎಂಬಲ್ಲಿ ನಡೆದಿದೆ.
ಲಕ್ಷ್ಮೀ ನಗರ ನಿವಾಸಿ ಅಬ್ದುಲ್ಲಾ ಎಂಬವರ ಪುತ್ರ ಆನ್ ಲೈನ್ ಪರೀಕ್ಷಾ ಪೇಪರ್ ಗಳನ್ನು ಮದರಸಕ್ಕೆ ನೀಡಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಸ್ತೆ ಬದಿ ನಿಲ್ಲಿಸಲಾಗಿದ್ದ ಮಾರುತಿ ಓಮ್ನಿ ಕಾರಿನ ಬಾಗಿಲು ತೆಗೆದು ವ್ಯಕ್ತಿಯೋರ್ವ ಬಾಲಕನ ಕೈ ಹಿಡಿದು ಎಳೆದಿದ್ದು, ತಾನು ಆತನ ಕೈಯನ್ನು ಕಚ್ಚಿ ಆತನ ಹಿಡಿತದಿಂದ ತಪ್ಪಿಸಿಕೊಂಡು ಮನೆಗೆ ಬಂದಿರುವುದಾಗಿ ಬಾಲಕ ಮನೆ ಮಂದಿಗೆ ತಿಳಿಸಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಠಾಣೆ ಪೊಲೀಸರು ಹಾಗು ಸ್ಥಳೀಯರು ತಕ್ಷಣವೇ ಪತ್ತೆ ಕಾರ್ಯಾಚರಣೆ ನಡೆಸಿದರಾದರೂ ಅಪಹರಣಕ್ಕೆ ಯತ್ನಿಸಲಾದ ಕಾರು ಪತ್ತೆಯಾಗಲಿಲ್ಲ. ಸಮೀಪದ ಸಿಸಿ ಗಳನ್ನು ಪರಿಶೀಲಿಸಿದಾಗ ಬಾಲಕ ಹೇಳಿದ ಸ್ಥಳದಲ್ಲಿ ಮತ್ತು ಸಮಯದಲ್ಲಿ ಮಾರುತಿ ಓಮ್ನಿ ಕಾರೊಂದು ರಸ್ತೆ ಬದಿ ನಿಂತಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
- Advertisement -