- Advertisement -
- Advertisement -
ಸುಳ್ಯ; ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ತಲವಾರಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ.
ಇಲ್ಲಿನ ಶ್ರೀ ಪಂಚಲಿಂಗೇಶ್ವರ ಪೆಟ್ರೋಲ್ ಪಂಪ್ ಬಳಿ ಇರುವ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯವಿರುವ ಪ್ರವೀಣ ಎಂಬವರಿಗೆ ಇನ್ನೋರ್ವ ನಿವಾಸಿ ಧರ್ಮಲಿಂಗಂ ಎಂಬವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ. ಈ ವೇಳೆ ಪ್ರವೀಣ್ ಅವರು ತಮ್ಮ ವಾಹನದಿಂದ ತಲವಾರು ತೆಗೆದು ಹಲ್ಲೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಕೂಡಲೇ ಅಲ್ಲಿದ್ದವರು ತಡೆದಿದ್ದಾರೆ. ಈ ಬಗ್ಗೆ ಧರ್ಮಲಿಂಗಂ ರವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
- Advertisement -