- Advertisement -
- Advertisement -
ತಿರುಪತಿ: ತಿರುಪತಿ ತಿಮ್ಮಪ್ಪನ ಸನ್ನಿಧಿ ಪಾವಿತ್ರ ಕ್ಷೇತ್ರ. ದಿನನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಬರುತ್ತಾರೆ. ಆದ್ರೆ ಇಲ್ಲಿಯೇ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು ಬೆಟ್ಟ ಹತ್ತುತ್ತಿದ್ದ ಭಕ್ತರನ್ನು ಬೆದರಿಸಿ ದರೋಡೆಗೆ ಯತ್ನಿಸಲಾಗಿದೆ.
ಅಲಿಪಿರಿಯಿಂದ ತಿರುಮಲಕ್ಕೆ ಕುಟುಂಬವೊಂದು ಬೆಟ್ಟ ಹತ್ತುವಾಗ ಕಳ್ಳರ ಗುಂಪೊಂದು ಅವರನ್ನು ಅಡ್ಡಗಟ್ಟಿ ದರೋಡೆಗೆ ಯತ್ನಿಸಿದೆ. ಕರ್ನೂಲ್ ಮೂಲದ ಸುನಿಲ್ ಅವರ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ತಿರುಮಲ ಬೆಟ್ಟ ಹತ್ತುತ್ತಿದ್ದರು. ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿಕುತ್ತಿಗೆಯಲ್ಲಿದ್ದ ಚಿನ್ನದ ಸರ ದೋಚಲು ಯತ್ನಿಸಿದಾಗ ಇವರು ಸಹಾಯವಾಣಿ ಸಂಖ್ಯೆ 100 ಕ್ಕೆ ಕರೆ ಮಾಡಿ ಕೂದಲೆಳೆಯಂತರದಲ್ಲಿ ಪಾರಾಗಿದ್ದಾರೆ.
- Advertisement -