Monday, April 29, 2024
Homeಕೊಡಗುಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೊಡಗಿನಲ್ಲಿ ಮತಾಂತರಕ್ಕೆ ಯತ್ನ: ಕೇರಳದ ದಂಪತಿಯ ಬಂಧನ

ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೊಡಗಿನಲ್ಲಿ ಮತಾಂತರಕ್ಕೆ ಯತ್ನ: ಕೇರಳದ ದಂಪತಿಯ ಬಂಧನ

spot_img
- Advertisement -
- Advertisement -

ಮಡಿಕೇರಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೊಡಗಿನಲ್ಲಿ ಬಲವಂತದ ಮತಾಂತರಕ್ಕೆ ಯತ್ನಿಸಲಾಗಿದೆ. ಈ ಸಂಬಂಧ ಕೇರಳ ಮೂಲಕ ದಂಪತಿಯನ್ನು ಬಂಧಿಸಲಾಗಿದೆ.

ಮಡಿಕೇರಿಯ ಪೊನ್ನಂಪೇಟೆ ತಾಲೂಕಿನ ಮಂಚಳ್ಳಿಯಲ್ಲಿ, ಪಣಿ ಎರವರ ಮುತ್ತ ಎಂಬುವರನ್ನು ಕೇರಳ ಮೂಲದ ಕುರಿಯಚ್ಚನ್-ಸಲಿನಾಮ ಎಂಬ ಕ್ರೈಸ್ತ ದಂಪತಿ ಮತಾಂತರಕ್ಕೆ ಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ, ಮತಾಂತರವನ್ನು ತಡೆದಿದ್ದಾರೆ. ಅಲ್ಲದೇ ಕುಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ, ಕೇರಳ ಮೂಲದ ಮಾನಂದವಾಡಿಯ ಕುರಿಯಚ್ಚನ್ ಮತ್ತು ಸಲಿನಾಮ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!