Wednesday, June 24, 2026
Homeಕರಾವಳಿಪಿಲಿಕುಳ ಜೈವಿಕ ಉದ್ಯಾನವನ ಹಸ್ತಾಂತರಕ್ಕೆ ಪ್ರಾಧಿಕಾರ ಉತ್ಸುಕ: ಡಿಸಿ ದರ್ಶನ್

ಪಿಲಿಕುಳ ಜೈವಿಕ ಉದ್ಯಾನವನ ಹಸ್ತಾಂತರಕ್ಕೆ ಪ್ರಾಧಿಕಾರ ಉತ್ಸುಕ: ಡಿಸಿ ದರ್ಶನ್

- Advertisement -
- Advertisement -

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ಪಿಲಿಕುಳ ಜೈವಿಕ ಉದ್ಯಾನವನದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಯೋಚಿಸಿದೆಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ತಿಳಿಸಿದ್ದಾರೆ.

ಕರ್ನಾಟಕ ಹೈಕೋರ್ಟ್ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳನ್ನು ನೋಡಿಕೊಳ್ಳುವ ವಿಧಾನದ ಬಗ್ಗೆ ಪ್ರತಿಕೂಲ ಹೇಳಿಕೆಗಳನ್ನು ನೀಡಿದೆ ಎಂಬ ವರದಿಗಳನ್ನು ಜಿಲ್ಲಾಧಿಕಾರಿ ದರ್ಶನ್ ನಿರಾಕರಿಸಿದರು.

ಪ್ರಾಧಿಕಾರದ ಮುಖ್ಯಸ್ಥರಾಗಿರುವ ಜಿಲ್ಲಾಧಿಕಾರಿ ದರ್ಶನ್, ಉದ್ಯಾನವನದಲ್ಲಿನ ಮೂಲಸೌಕರ್ಯದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರವು ಕೆಲವು ಬದಲಾವಣೆಗಳನ್ನು ಕೋರಿದೆ ಎಂದು ಹೇಳಿದರು.

ಪ್ರಾಧಿಕಾರದ ಆಯುಕ್ತ ಎನ್. ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, ಉದ್ಯಾನವನದ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೈಕೋರ್ಟ್‌ನಲ್ಲಿ ಬಾಕಿ ಇದೆ ಎಂದರು.

- Advertisement -

Latest News

error: Content is protected !!