ಬಂಟ್ವಾಳ; ತನಗೆ ಫೈನ್ ಹಾಕಿದ್ದಕ್ಕೆ ಆಕ್ರೋಶಗೊಂಡ ಆಟೋ ಚಾಲಕ ಟ್ರಾಫಿಕ್ ಎಸ್ ಐ ಹಾಗೂ ವಾಹನಗಳಿಗೆ ರಿಕ್ಷಾ ಡ್ರೈವರ್ ಬೆಂಕಿ ಹಚ್ಚಲು ಮುಂದಾದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ.
ಟ್ರಾಫಿಕ್ ಎಸ್ಐ.ಸುತೇಶ್ ಅವರು ಕೈಕಂಬದಲ್ಲಿ ವಾಹನಗಳ ತಪಾಸಣಾ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಎಂಬ ಆಟೋ ಚಾಲಕ ಆಟೋ, ಯೂನಿಫಾರ್ಮ್ ಹಾಕದೆ ಮೊಬೈಲ್ ನಲ್ಲಿ ಮಾತನಾಡಿಕೊಂಡು ರಿಕ್ಷಾ ಓಡಿಸುತ್ತಿದ್ದ. ಈತನನ್ನು ನಿಲ್ಲಿಸಿ , ಆತನ ಮೇಲೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕಾಗಿ 2 ಸಾವಿರ ದಂಡ ಹಾಕಿ ನೋಟೀಸ್ ನೀಡಿದ್ದಾರೆ.
ಇದಕ್ಕೆ ಕೆರಳಿದ ಆತ ಬೀದಿ ರಂಪಾಟ ಮಾಡಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಅಲ್ಲದೇ ಬಳಿಕ ರಿಕ್ಷಾವನ್ನು ಪೋಲೀಸರ ಎದುರಿನಲ್ಲಿಯೇ ಸುಟ್ಟುಹಾಕುವುದಾಗಿ ಬೆದರಿಸಿದ್ದಾನೆ, ಬಳಿಕ ಎಸ್ ಐ ಹಾಗೂ ಜೀಪ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲುಲು ಮುಂದಾಗಿದ್ದಾನೆ. ಎಸ್.ಐ.ಅವರು ಆತನ ಮೇಲೆ ದೂರು ನೀಡಿದ್ದಾರೆ. ಸದ್ಯ ಈತ ತಲೆಮರೆಸಿಕೊಂಡಿದ್ದು ಈತನ ವಿರುದ್ಧ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.