Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಶಿಬಾಜೆ ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ...

ಬೆಳ್ತಂಗಡಿ : ಶಿಬಾಜೆ ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ; ಆರೋಪಿ ಕುರುಂಬು ಧರ್ಣಪ್ಪ ಗೌಡ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ : ರಸ್ತೆಗೆ ಅಡ್ಡಲಾಗಿ ಸಣ್ಣ ಇಟ್ಟಿಗೆಯನ್ನು ಇಟ್ಟು ಅದಕ್ಕೆ ಗೋಣಿಚೀಲ ಹಾಕಿ ಯಾವುದೇ ಸೂಚನಾ ಫಲಕ ಇಡದೆ ರಸ್ತೆಯನ್ನು ಮುಚ್ಚಿದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಶಿಬಾಜೆಯ ಅಭಿಲಾಷ್ ಗಾಯಗೊಂಡ ಪ್ರಕರಣ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಚಾಲಕ ನೀಡಿದ ದೂರಿನ ಮೇರೆಗೆ ಜೂ. 2 ರಂದು ಆರೋಪಿ ಶಿಬಾಜೆಯ ಕುರುಂಬು ನಿವಾಸಿ ಧರ್ಣಪ್ಪ ಗೌಡ ವಿರುದ್ಧ (BNS) 2023(u/s -285,125(a)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ: ಜೂನ್ 1 ರಂದು ಚಾಲಕ ಶಿಬಾಜೆಯ ಅಭಿಲಾಷ್ ತನ್ನ ಆಟೋ ರಿಕ್ಷಾ (KA-70-8816) ದಲ್ಲಿ ಶಿಬಾಜೆ ಕಡೆಯಿಂದ ಅರಸಿನಮಕ್ಕಿ ಕಡೆಗೆ ಸುಮಾರು ರಾತ್ರಿ 8:49 ಗಂಟೆಗೆ ಚಲಾಯಿಸಿಕೊಂಡು ಹೋಗುತ್ತಿರುವ ಸಮಯದಲ್ಲಿ ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ಕುರುಂಬು ಎಂಬಲ್ಲಿಗೆ ತಲುಪುತ್ತಿದಂತೆ ಅಭಿಲಾಷ್ ಚಲಾಯಿಸುತ್ತಿದ್ದ ರಸ್ತೆಯಲ್ಲಿ ಶಿಬಾಜೆ ಗ್ರಾಮದ ಕುರುಂಬು ನಿವಾಸಿ ಧರ್ಣಪ್ಪ ಗೌಡ ಎಂಬುವರು ರಸ್ತೆಯ ಮಧ್ಯಭಾಗದಲ್ಲಿ ಸಣ್ಣ ಇಟ್ಟಿಗೆಯನ್ನು ಇಟ್ಟು ಅದರ ಮೇಲೆ ಗೋಣಿಚೀಲವನ್ನು ಹಾಕಿ ಯಾವುದೇ ಸೂಚನಾ ಫಲಕ ಇಡದೇ ರಸ್ತೆಯನ್ನು ಮುಚ್ಚಿದ ಪರಿಣಾಮ ಅಭಿಲಾಷ್ ತನ್ನ ಬಾಬು ಆಟೋರಿಕ್ಷಾದ ಚಾಲನಾ ನಿಯಂತ್ರಣ ತಪ್ಪಿ ಒಮ್ಮೆಲೆ ಆಟೋರಿಕ್ಷಾ ಸಮೇತ ರಸ್ತೆಗೆ ಬಲಮಗ್ಗುಲಾಗಿ ಬಿದ್ದ ಕೂಡಲೇ ಅಭಿಲಾಷ್ ಅವರ ತಮ್ಮನಿಗೆ ದೂರವಾಣಿ ಕರೆ ಮೂಲಕ ಅಪಘಾತವಾದ ಬಗ್ಗೆ ತಿಳಿಸಿದ ತಕ್ಷಣ ಅವರ ತಮ್ಮ ಅನೀಷ್ ಎಂಬುವರು ಅಪಘಾತ ಸ್ಥಳಕ್ಕೆ ಬಂದು ಗಾಯಗೊಂಡ ಅಭಿಲಾಷ್ ನನ್ನು ಎತ್ತಿ ಉಪಚರಿಸಿ ಬಲಕಾಲಿನ ಮೊಣಕಾಲೆಗೆ ರಕ್ತಗಾಯ ಬಲಕಾಲಿನ ಮಣಿಗಂಟೆಗೆ ರಕ್ತಗಾಯ ಹಾಗೂ ಬಲ ಕಿಬ್ಯೂಟಿಗೆ ತರಚಿದ ಗಾಯವಾದವರನ್ನು ಚಿಕಿತ್ಸೆ ಬಗ್ಗೆ ಉಜಿರೆಯ SDM ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!