- Advertisement -
- Advertisement -
ಬೆಂಗಳೂರು: ಕೆಎಂಪಿಎಲ್ ನಲ್ಲಿ ಅತ್ಯುತ್ತಮ ಸಾಧನೆ ತೋರಿದ ರಸ್ತೆ ಸಾರಿಗೆ ಸಂಸ್ಥೆಯ ಘಟಕಗಳಿಗೆ ಇಂದು ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಕೆಎಸ್ ಆರ್ ಟಿಸಿಯ ಮಂಗಳೂರು ವಿಭಾಗದ ಘಟಕ-2ಕ್ಕೆ 75 ಸಾವಿರ ರೂಪಾಯಿ ನಗದು ಬಹುಮಾನ ನೀಡಲಾಗಿದೆ. ಕೆಎಸ್ ಆರ್ ಟಿಸಿ ಎಂಡಿ ವಿ. ಅನ್ಬುಕುಮಾರ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಪೆಟ್ರೋಲಿಯಂ ಸಂರಕ್ಷಣಾ ಸಂಶೋಧನಾ ಸಂಸ್ಥೆ ಪ್ರತಿವರ್ಷ ದೇಶದಾದ್ಯಂತ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಇಂಧನ ಕ್ಷಮತಾ ಮಹೋತ್ಸವ ಕಾರ್ಯಕ್ರಮ ಏರ್ಪಡಿಸುತ್ತದೆ.
- Advertisement -