Saturday, June 28, 2025
Homeಕರಾವಳಿಮಂಗಳೂರು"ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024ಕ್ಕೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ...

“ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024ಕ್ಕೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ – 2 ಆಯ್ಕೆ

spot_img
- Advertisement -
- Advertisement -

ಬೆಳ್ತಂಗಡಿ; ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024″ ಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದರು. ಅದರಲ್ಲಿ ಆಯ್ದ 100 ಶಾಲೆಗಳಿಗೆ ಮಾತ್ರ ಈ ಪ್ರಶಸ್ತಿ ನೀಡುವುದಾಗಿ ತಿಳಿಸಿದರು. ಅದರಲ್ಲಿ ನಮ್ಮ” ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ – 2 ಧರ್ಮಸ್ಥಳ “ಆಯ್ಕೆ ಆಗಿರುವುದು ನಮ್ಮ ಬೆಳ್ತಂಗಡಿ ತಾಲೂಕಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಈ ಪ್ರಶಸ್ತಿಯನ್ನು ನಮ್ಮ ಶಾಲೆಯ ಹಿರಿಯ ಶಿಕ್ಷಕಿ ಶಾರದ ಜಿ ಇವರು ದಿನಾಂಕ 27.07.2024ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ,ಸತ್ಯಸಾಯಿ ಗ್ರಾಮದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ  ಭಾಗವಹಿಸಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ದಿವ್ಯ ಸಾನಿಧ್ಯದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

- Advertisement -
spot_img

Latest News

error: Content is protected !!