- Advertisement -
- Advertisement -
ಬೆಂಗಳೂರು: ನಟಿ ರಾಗಿಣಿಯವರು ಕಳೆದ ಉಪಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದು ನಿಜ. ಆದರೆ ಅವರು ಬಿಜೆಪಿ ಸೇರ್ಪಡೆಯಾಗಿಲ್ಲ. ಸಾಮಾನ್ಯವಾಗಿ ಸಿನಿಮಾ ನಟ ನಟಿಯರು ಒಂದೇ ಪಕ್ಷಗಳ ಪರ ಪ್ರಚಾರ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ವಿಜಯೇಂದ್ರ, ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದನ್ನು ಬಿಜೆಪಿ ಸವಾಲಾಗಿ ಸ್ವೀಕರಿಸಿದೆ. ಡ್ರಗ್ಸ್ ದಂಧೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರೂ ಇದ್ದರೂ ಕೂಡ ಅವರಿಗೆ ಸಹಕಾರ ನೀಡುವುದಿಲ್ಲ, ದಂಧೆಯನ್ನು ಬುಡಸಮೇತ ಕಿತ್ತು ಹಾಕಲಿದ್ದೇವೆ ಎಂದರು.
- Advertisement -