- Advertisement -
- Advertisement -
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ವಿಚಾರಣೆಯನ್ನು 3 ವಾರಗಳ ಕಾಲ ಮುಂದೂಡಿದೆ.
ಈ ಸಂಬಂಧ ಸರ್ಕಾರವು ಜುಲೈ 19ರಂದು ಸಂಪುಟದ ಉಪಸಮಿತಿ ಶಿಫಾರಸಿನಂತೆ ಕ್ರಮ ಕೈಗೊಂಡಿತ್ತು. ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಪೂಜಾವಿಧಿ ನಡೆಸಲು ಮುಜಾವರ್ ಹಾಗೂ ಅರ್ಚಕರಿಗೆ ಅವಕಾಶ ನೀಡಲಾಗಿದೆ’ ಎಂದು ಸಂಪುಟದಲ್ಲಿ ನಿರ್ಧರಿಸಲಾಗಿತ್ತು.
- Advertisement -