- Advertisement -
- Advertisement -
ಬೆಂಗಳೂರು : ಮೊನ್ನೆಯಷ್ಟೇ ಬಿಜೆಪಿ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಎಂಎಲ್ಸಿ ಬಾಬುರಾವ್ ಚಿಂಚನಸೂರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸದಲ್ಲಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಬಾಬುರಾವ್ ಚಿಂಚನಸೂರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬಾಬುರಾವ್ ಚಿಂಚನಸೂರ್’ ಗುರುಮಿಠಕಲ್ ಕ್ಷೇತ್ರದ ಚುನಾವಣಾ ಟಿಕೆಟ್ ಕೇಳಿದ್ದರು. ಆದರೆ ಚಿಂಚನಸೂರ್ ವಿಧಾನ ಪರಿಷತ್ ಸದಸ್ಯರಾಗಿದ್ದ ಹಿನ್ನೆಲೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಈ ಹಿನ್ನೆಲೆ ವಿಧಾನಸಭಾ ಪರಿಷತ್ ಸದಸ್ಯಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
- Advertisement -