Monday, May 6, 2024
Homeಕರಾವಳಿಮಂಗಳೂರಿನಲ್ಲಿ ನೀರಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಮಂಗಳೂರಿನಲ್ಲಿ ನೀರಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

spot_img
- Advertisement -
- Advertisement -

ಮಂಗಳೂರು: ನೀರಿದ್ದ ಬಕೆಟ್ ಗೆ ಬಿದ್ದು 8 ತಿಂಗಳ ಕಂದಮ್ಮ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಕಾವೂರಿನಲ್ಲಿ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶಾ ಮೃತ ಕಂದಮ್ಮ.


ಜಾರ್ಖಂಡ್ ಮೂಲದವರಾದ ಫಿರೋಝ್ ಅನ್ಸಾರಿ ಕೂಲಿ ಕಾರ್ಮಿಕರಾಗಿದ್ದು, ಈ ದಂಪತಿ ಕಾವೂರು ಮಸೀದಿಯ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಬುಧವಾರ ಸಂಜೆ ಮಗು ಆಯಿಶಾ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು, ಮೃತಪಟ್ಟಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!