Thursday, May 16, 2024
Homeಕರಾವಳಿಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಮಾಹಿತಿ ಕಾರ್ಯಾಗಾರ; 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಮಾಹಿತಿ ಕಾರ್ಯಾಗಾರ; 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

spot_img
- Advertisement -
- Advertisement -

ಬೆಳ್ತಂಗಡಿ : ಗರ್ಭಿಣಿ ಮಹಿಳೆಯರಿಗೆ ವಿವಿಧ ರೋಗದ ಬಗ್ಗೆ ಆರೋಗ್ಯ ಇಲಾಖೆಯಿಂದ ಆರೋಗ್ಯ ಜಾಗೃತಿ ಕಾರ್ಯಗಾರ ನಡೆಸಲಾಯಿತು‌. ಈ ವೇಳೆ ಆರೋಗ್ಯ ಇಲಾಖೆಯಿಂದ 40 ಮಂದಿ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಜ.9 ರಂದು ನಡೆಸಲಾಯಿತು.

ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ. ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. ಮಂಗಳೂರು ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ.ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಕಚೇರಿ. ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ತಾಯಿಯಿಂದ ಮಗುವಿಗೆ ಹರಡುವ ಹೆಚ್.ಐ.ವಿ, ಸಿಫಿಲಿಸ್ ಮತ್ತು ಹೆಪಟೈಟಿಸ್ ನಿರ್ಮೂಲನೆ ಆಂದೋಲನೆ ಕಾರ್ಯಕ್ರಮದ ಮೂಲಕ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೆಳ್ತಂಗಡಿ ತಾಲೂಕಿನ ಸುಮಾರು 40 ಗರ್ಭಿಣಿ ತಾಯಂದಿರಿಗೆ ಆರೋಗ್ಯ ಇಲಾಖೆ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆ ಆಡಳಿತ ವೈದ್ಯಾಧಿಕಾರಿ ತಾಲೂಕು ಆಸ್ಪತ್ರೆ ಬೆಳ್ತಂಗಡಿಯ ಡಾ.ಚಂದ್ರಕಾಂತ್ ವಹಿಸಿದ್ದರು ಹಾಗೂ ನೇತ್ರ ತಜ್ಞ ವೈದ್ಯಾಧಿಕಾರಿ ಡಾ.ರಮೇಶ್, ದಂತ ವೈದ್ಯರು ಡಾ.ಹೇಮಲತಾ, ಸ್ತ್ರೀ ರೋಗ ತಜ್ಞ ಜಾನೀಸ್, ಐಸಿಟಿಸಿ ಆಪ್ತ ಸಮಾಲೋಚಕ ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಧರ್ಮಪಾಲ್ ಭಾಗವಹಿಸಿದರು.ಕಾರ್ಯಕ್ರಮ ನಿರೂಪಣೆ ಬೆಳ್ತಂಗಡಿ ಟಿ.ಹೆಚ್.ಓ ಕಚೇರಿಯ ಸಿಬ್ಬಂದಿ ಅಜಯ್ ನೆರವೇರಿಸಿದರು.

- Advertisement -
spot_img

Latest News

error: Content is protected !!